ಪ್ರತೀ ಸಲವೂ ಕರ್ನಾಟಕದವರೇ ಈ ರೀತಿಯ ಅನ್ಯಾಯಕ್ಕೆ ಒಳಗಾಗಬೇಕೇ? ಸಾವಿರಾರು ಜನ ನಿತ್ಯ ಬ್ಲಾಕಿನಲ್ಲಿ ಹಣ ಕೊಟ್ಟಾದರೂ ಓಡಾಡುವ ಮಾರ್ಗವೊಂದರಲ್ಲಿ ರೈಲನ್ನು ಓಡಿಸಲು ಅದೆಷ್ಟು ಬೇಸರ ಈ ಇಲಾಖೆಗೆ? ನಮ್ಮ ಹಕ್ಕಾಗಿರುವ ಈ ವಿಷಯಕ್ಕೆ ನಾವು ಎಷ್ಟೆಂದು ಅಳಬೇಕಾಗಿದೆಯಲ್ಲ ಇವರೆಲ್ಲರ ಮುಂದೆ? ಕೊಟ್ಟ ರೈಲುಗಳಿಗೂ ನೂರೆಂಟು ಕಂಡಿಷನ್ನುಗಳು. ಈ ಕಂಡಿಷನ್ನುಗಳಿಗೆ ಒಪ್ಪಿಕೊಂಡರೂ ಏನಾದರೂ ಒಂದು ಕೊರತೆಯನ್ನು ಬೇಕೆಂದೇ ನಿರ್ಮಿಸುತ್ತಾರಲ್ಲ. ಎಂತಹ ದುರ್ದೈವ ನಮ್ಮದು?
Author: ರಘು
ಕಾಮಧೇನುವಿನ ಪೀಳಿಗೆಯ ಹಸುವಿನ ನೆರಳನ್ನು ಆಶ್ರಯಿಸಿ ಜೀವಿಸುತ್ತಿರುವವನು.
ಫೋಟೋವನ್ನು ಒಂದು ಒಳ್ಳೆಯ ಉದ್ದೇಶದಿಂದಲೇ ಮಾಡಿದ್ದು ಎಂದುಕೊಳ್ಳೋಣ. ಆದರೆ ಕ್ರಮವು ಮಾತ್ರ ಸರಿಯಾದುದಲ್ಲ. ರಾಯರ ಮೇಲೆ ಭಕ್ತಿಯನ್ನು, ಸರಿಯಾದ ಮಾರ್ಗವನ್ನು ಪ್ರೀತಿಯಿಂದ ಪ್ರಚಾರ ಮಾಡಬೇಕೇ ಹೊರತು ಹೀಗೆ ವಿಚಿತ್ರರೀತಿಯಲ್ಲಿ ಅಲ್ಲ. ಹೀಗೆ ಮಾಡಿದರೆ ನಮಗೂ ಮಿಶನರಿಗಳಿಗೂ ವ್ಯತ್ಯಾಸವೇ ಇಲ್ಲವಾಗುತ್ತದೆ.
ದುಃಖವನ್ನು ತಡೆಯದೆ, ಕಣ್ಣುಗಳೆರಡನ್ನೂ ಮುಚ್ಚಿ, ಕೃಷ್ಣ ಕೃಷ್ಣ…. ಎನ್ನುತ್ತಲೇ ಇರುವಂತೆ… ಜನರ ಮಧ್ಯದಿಂದ ಮತ್ತೊಮ್ಮೆ ಬಂಗಾರದ ಹೊಳೆಯಂತೆ ಬೆಳಕು ಬಂದಿತು. ಕಂಗಳ ಒಳಪಟಲಕ್ಕೆ ಆ ಬೆಳಕು ಸೋಕಿದ್ದೇ ತಡ. ಕಂಬನಿ ತುಂಬಿದ ತನ್ನ ಕಣ್ಣೆವೆಗಳನ್ನು ನಿಧಾನವಾಗಿ ತೆರೆದಳು ಕುಬ್ಜೆ. ಅಷ್ಟೇ!. ಹೃದಯವು ಒಮ್ಮೆಗೇ, ಒಂದೇ ಬಾರಿ ಸದ್ದು ಮಾಡಿ ನಿಂತೇ ಹೋದಂತಾಯಿತು. ಬಂದದ್ದು ಬೆಳಕು ಮಾತ್ರವಲ್ಲ. ತನ್ನ ಹೃದಯಪ್ರಕಾಶದ ಒಡೆಯನೇ ನಡೆದು ಬಂದಿದ್ದ!
ಇತ್ತೀಚೆಗೆ ಬಾಗಲಕೋಟೆಯ ಭಕ್ತರೊಬ್ಬರ ಮನೆಯಲ್ಲಿ ಪರಿಮಳಪ್ರಸಾದವು ಶಾಲಗ್ರಾಮಗಳಾಗಿದ್ದಾವೆ ಎಂಬ ಒಂದು ಮಾತು ಬಂದಿತು. ಅದನ್ನು ಕುರಿತು ಶ್ರೀ ವಾದಿರಾಜ ಹೆಚ್.ಕೆ ಎನ್ನುವ ಒಬ್ಬರು ಕೆಲವು ಧರ್ಮಸಂದೇಹಗಳನ್ನು ಮಾಡಿದ್ದರು. ಆದರೆ ತಿಳಿದವರಾರೂ ಅದಕ್ಕೆ ಉತ್ತರ ಕೊಡದೆ ಹೋದ ಪ್ರಯುಕ್ತ ಸುಮ್ಮನೆ ಚರ್ಚೆಯು ಅಡ್ಡ ಹಾದಿಗೆ ಹೋಯಿತು. ಯಾರೋ ದೇಶಪಾಂಡೆ ಎನ್ನುವವರು ರಾಯರ ಮಹಿಮೆಯನ್ನೇ ಪ್ರಶ್ನಿಸಿದರು. ಅವರ ಮಾತಿಗೆ ಉತ್ತರ ಬರೆವಷ್ಟರಲ್ಲಿ ವಾದಿರಾಜರು ಕಮೆಂಟ್ಸನ್ನು ಆಫ್ ಮಾಡಿಬಿಟ್ಟರು. ಸರಿ ಹೇಗಿದ್ದರೂ ಬರೆಯುತ್ತಿದ್ದೇನೆ ಡೀಟೇಲ್ ಆಗಿಯೇ ನನ್ನ ಅಭಿಪ್ರಾಯವನ್ನು ಇಲ್ಲಿ ಬರೆಯೋಣವೆಂದುಕೊಂಡೆ. ಇಲ್ಲಿದೆ ನನ್ನ ಉತ್ತರ.
ಆದರೆ ಈ ವಿಷಯವನ್ನು ಕುರಿತು ಇನ್ನೂ ಆಳವಾಗಿ ನೋಡಿದರೆ ಶ್ರೀಕೃಷ್ಣನ ನಿಜವಾದ ರಥವೆಂದರೆ ಪ್ರಾಣದೇವರೇ ಆಗಿದ್ದಾರೆ ಎನ್ನುವುದು ನಮಗೆ ತಿಳಿಯುತ್ತದೆ. ಶ್ರೀವಿಷ್ಣುಸಹಸ್ರನಾಮದಲ್ಲಿ ವರದೋ ವಾಯುವಾಹನಃ ಎಂದಿರುವುದು ಇದನ್ನೇ. ವಿಷ್ಣುವು ವಾಯುವಿನ ಮೇಲೆ ಕುಳಿತು ವರಗಳನ್ನು ಕೊಡುವವನು ಎಂದು ಇದರ ಅರ್ಥ. ಈ ಅರ್ಥದಲ್ಲಿ ರಥಾಭಿಮಾನಿದೇವತೆಗಳೂ ಮತ್ತು ರಥವನ್ನು ಎಳೆವ ಅದೃಷ್ಟಶಾಲಿಗಳ ಅಂತರಂಗದಲ್ಲೂ ನಿಂತು ಕಮಲಾನಾಥನನ್ನು ಹೊತ್ತು ತಿರುಗಾಡಿಸುವವರು ಪ್ರಾಣದೇವರೇ ಆಗಿದ್ದಾರೆ. ಸಹಜವಾಗಿಯೇ ಸಂತಸದ ಸರ್ವಶ್ರೇಷ್ಠಾನುಭವವು ದೊರೆಯುವುದು ಮುಖ್ಯಪ್ರಾಣದೇವರಿಗೆ ಮಾತ್ರ. ಉಳಿದವರಿಗೆಲ್ಲ ಆಗುವುದು ಅವರವರ ಯೋಗ್ಯತಾನುಸಾರವಾದ ಆನಂದಾನುಭವ.
ಪಿಡಿಎಫ್ ಗಳನ್ನು ಲೇಖಕನ ಅಥವಾ ಪ್ರಕಾಶಕರ ಅನುಮತಿಯಿಲ್ಲದೆ ಪರಸ್ಪರರಲ್ಲಿ ಹಂಚಿಕೊಳ್ಳುವುದು ಕಳ್ಳತನವೇ ಹೌದು. ಗ್ರಂಥವೊಂದನ್ನು ಮುದ್ರಿಸಿ, ಪ್ರಚುರಪಡಿಸುವಲ್ಲಿ ಪ್ರಕಾಶಕನು ಬೆವರನ್ನಲ್ಲ, ರಕ್ತವನ್ನೇ ಬಸಿದಿರುತ್ತಾನೆ ಎಂಬುದು ಕ್ರೂರವಾದ ಸತ್ಯ. ಈ ಮಾತು ಕನ್ನಡಗ್ರಂಥಗಳ ಮಟ್ಟಿಗೆ ಹೆಚ್ಚು ಅನ್ವಯಿಸುತ್ತದೆ. ಧಾರ್ಮಿಕ ಗ್ರಂಥಗಳ ಪ್ರಕಾಶನದ ಮಟ್ಟಿಗಂತೂ ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅನ್ವಯಿಸುವುದು. ಧರ್ಮಶಾಸ್ತ್ರಗ್ರಂಥಗಳನ್ನು ಮುದ್ರಿಸಿ ಲಾಭಗಳಿಸುವುದು ಎಂದರೆ ಸಶರೀರನಾಗಿ ಸ್ವರ್ಗಕ್ಕೆ ಹೋಗುವ ಬಯಕೆಯಂತೆಯೇ ಆಗಿದೆ. ಇದು ಕಹಿಯಾದ ವಾಸ್ತವವು.
ಶ್ರೀಹರಿಯು ಸ್ವಪ್ನಾವಸ್ಥೆಯಲ್ಲಿ ಯಾರಿಗೆ ಹೇಗೆ ಪ್ರೇರಣೆ ಮಾಡುತ್ತಾನೋ ಹೇಳಲಾಗದು. ಜ್ಞಾನಿಗಳು ಮತ್ತು ಆಚಾರಶೀಲರಾದವರಿಗೆ ಅವನ ಪ್ರಾಶಸ್ತ್ಯವೆನ್ನುವುದು ಖಂಡಿತ. ಆದರೆ ಎಷ್ಟೋ ಬಾರಿ ಮೇಲ್ನೋಟಕ್ಕೆ ಅತ್ಯಂತ ಸಾಧಾರಣಸ್ವರೂಪದಲ್ಲಿ ಕಾಣುವ ಜನರಿಗೂ ಅವನಿಂದ ವಿಶೇಷವಾದ ಅನುಭವಗಳಾಗಿರುತ್ತವೆ. ಇಂತಹುದೇ ಒಂದು ಮೈನವಿರೇಳಿಸುವ ಒಂದು ಘಟನೆಯು ನನ್ನ ಅರಿವಿಗೆ ಬಂದಿತು.
ಶ್ರೀಮನ್ಮಾಧವತೀರ್ಥ ಶ್ರೀಪಾದಂಗಳವರ ಆರಾಧನೆಯನ್ನು ನಮ್ಮ ಗುರುಗಳು ಮೊನ್ನೆ ಕಂಪ್ಲಿಯಲ್ಲಿ ಆಚರಿಸಿದ ವಿಷಯವನ್ನು ಕುರಿತು ನಡೆದಿರುವ ಚರ್ಚೆಯಲ್ಲಿ ನಾನೊಂದು ಕಮೆಂಟಿಗೆ ಪ್ರತ್ಯುತ್ತರ…