ಇಂದು ಗುರುಗಳ ೬೫ನೆಯ ಜನ್ಮನಕ್ಷತ್ರ. ಇವರು ನನಗೆ ರಾಯರೇ ಕೊಟ್ಟಿರುವ ಕರದೀಪ. ಈ ದೀಪದ ಬೆಳಕಿನಲ್ಲಿ ನನ್ನ ಜೀವನ ನಡೆಯುತ್ತಿದೆ. ದೀಪದ ಬೆಳಕು ಇನ್ನೂ ನೂರಾರು ವರ್ಷಗಳ ಕಾಲ ಹಬ್ಬಿಯೇ ಇರಲಿ ಎಂದು ಆಶಿಸುತ್ತಾ ಅದೇ ಬೆಳಕಿನಲ್ಲಿಯೇ ಬರೆದ ಒಂದು ನುಡಿ ನಮನವಿದು. ಅವರ ಅಂತರ್ಯಾಮಿಯಾದ ಶ್ರೀರಾಯರು, ಶ್ರೀಹನುಮ ಮತ್ತು ಶ್ರೀರಾಮನಿಗೆ ಪ್ರಿಯವಾಗಲಿ.
Category: Articles
ಅವರ ಮಾತು ಶಾಪ ಮತ್ತು ಅನುಗ್ರಹ ಎರಡೂ ರೀತಿಯಲ್ಲಿ ವರ್ತಿಸಬಲ್ಲದು ಎಂಬ ಅರಿವಿದ್ದ ಅಧಿಕಾರಿಗಳು ಮುಚ್ಚಿದ್ದ ಬಾವಿಯನ್ನು ಎರಡೇ ದಿನಗಳಲ್ಲಿ ತೆಗೆಸಿದರು. ಸುಮಾರು 25 ಅಡಿಗಳಷ್ಟು ಶುದ್ಧವಾದ ನೀರು ಆ ಬಾವಿಯಲ್ಲಿ ಕೆಲವೇ ಗಂಟೆಗಳಲ್ಲಿ ತುಂಬಿಕೊಂಡಿತು.
ಮಡಿವಂತಿಕೆಯ ಹುಚ್ಚನ್ನು ಹಿಡಿಸಿಕೊಂಡ ಜನರು ಮಾಡುವ ತಪ್ಪು ಆಚರಣೆಗಳನ್ನು ನೋಡಿ ಶಾಸ್ತ್ರವೇ ಔಟ್ ಡೇಟೆಡ್ ಎನ್ನುವ ವಿಪರೀತದ ನಿರ್ಧಾರಕ್ಕೆ ಬರುವುದು ತಪ್ಪು. ಮನುಷ್ಯತ್ವವನ್ನು ಬಿಟ್ಟು ವ್ಯವಹರಿಸು ಎಂದು ಶಾಸ್ತ್ರಗಳು ಎಂದೂ ಹೇಳಿಲ್ಲ. ಹಾಗೆ ಹೇಳಿದ್ದೇ ಆದರೆ ರಾಯರು ಸರಸ್ವತೀದೇವಿಗೆ ಪಿಶಾಚಜನ್ಮದಿಂದ ಮುಕ್ತಿಗೊಳಿಸುವುದಾಗಲಿ, ಶ್ರೀವಾದಿರಾಜರು ವಿಧವಾ ಸ್ತ್ರೀಯಳ ಬಗ್ಗೆ ಅನುಕಂಪದ ಮಾತನ್ನಾಗಲಿ, ವಿಜಯದಾಸರು ಸಾಯುತ್ತಿದ್ದ ಕತ್ತೆಗೆ ನೀರು ಕುಡಿಸುವುದಾಗಲಿ ಮಾಡುತ್ತಿದ್ದಿಲ್ಲ. ಅಲ್ಲವೇ.
ಕರಣಿಕರ ಎದೆ ಝಲ್ಲೆಂದಿತು. ಸ್ವಾಮೀ !! ನಿನ್ನ ಇಚ್ಛೆ ಇಲ್ಲಿಯೇ ಇರಬೇಕೆಂದು ಇದೆಯೇ? ಎಂದು ಪ್ರಾರ್ಥಿಸಿ ನನ್ನ ಅನುಚರರ ಅರೋಗ್ಯ ಸರಿಮಾಡು ಪುನಃ ಸ್ವಸ್ಥಾನಕ್ಕೆ ಸೇರಿಸಿ ಬರುವೆ ಎಂದು ಬೇಡಿಕೊಂಡ !! ಅನುಚರರ ಕಣ್ಣು ಕಾಣತೊಡಗಿದವು. ಆದರೆ ಮಾರುತಿಯರಾಯ ಒಂದು ಇಂಚೂ ಅಲುಗುತ್ತಿಲ್ಲ. !!! ಪುನಃ ಬೇಡಿಕೊಂಡ ಕರಣಿಕ.. ಸ್ವಾಮಿಯ ವಿಗ್ರಹದಿಂದ ಭವ್ಯ ಬೆಳಕು ಗೋಚರವಾಯಿತು
ಮಾರನೆಯ ದಿನ ಬೆಳಿಗ್ಗೆ ಬಾಳೆಯ ನಾರಿನಲ್ಲಿ ಸುತ್ತಿದ ನಾಲ್ಕಾರು ಹೋಳಿಗೆಗಳು ಶಿಬರೂರಿನ ತಂತ್ರಿಗಳ ಅಡುಗೆ ಕೋಣೆಯನ್ನು ತಲುಪಿದವು. ಕೊಟ್ಟಾರಿಗಳಿಗೂ ಏನೋ ಸಂತೋಷ, ಈ ಕೆಲಸ ಮಾಡಲು. ಆ ದಿನ ಮಧ್ಯಾಹ್ನ ವೈಶ್ವಾನರನ ಆರಾಧನೆ ಮುಗಿದ ನಂತರ ಕುಲಪತಿಗಳಿಗೆ ಈ ವಿಷಯ ತಿಳಿದು ಹೃದಯ ಅರಳಿತು.
ಜವಾಬ್ದಾರಿಯನ್ನು ಹೇಗೆ ನಿರ್ವಹಿಬೇಕು ಎಂಬುದಕ್ಕೆ ಗುರುಗಳೇ ಪ್ರತ್ಯಕ್ಷ ಮಾದರಿ. ಇದೇ ಅಲ್ಲವೇ ಪ್ರೇಮವೆಂದರೆ? ಇದೇ ಅಲ್ಲವೇ ಸಾಮರ್ಥ್ಯವೆಂದರೆ? ಇದುವೆ ಅಲ್ಲವೇ ಶ್ರೀ-ಪ್ರಾಣ-ನಾಥನ ಒಲುಮೆಗೆ ಪಾತ್ರರಾಗುವುದು ಎಂದರೆ?
ಅಬ್ಬಾ! ಎಂತಹ ಮಹಾವ್ಯಕ್ತಿತ್ವ ಶ್ರೀಭುವನೇಂದ್ರ ತೀರ್ಥರದ್ದು? ಬರೆದ ಒಂದಕ್ಷರವನ್ನು ಕೂಡ ಅಳಿಸಿ ಹಾಕಲು ನಮ್ಮ ಮನಸ್ಸೊಪ್ಪದು. ಅಂತಹುದರಲ್ಲಿ ಸಕಲ ಅಕ್ಷರಾಭಿಮಾನಿ ದೇವತೆಗಳೆಲ್ಲ ನಾಮುಂದು ತಾಮುಂದು ಎಂದು ಬಂದು ನೆಲೆಸಿದ ಮಹಾನ್ ಭಾಷ್ಯವೊಂದನ್ನು ನೀರಲ್ಲಿ ವಿಸರ್ಜನೆ ಮಾಡಲು ಅದೆಷ್ಟು ಧೈರ್ಯ ಇದ್ದಿರಬೇಕು? ಆಚಾರ್ಯ ಮಧ್ವರ ಮಾತು ಎಂದರೆ ಅದೆಂತಹ ನಿಷ್ಠೆ ಅವರಿಗೆ? ಅದೆಷ್ಟು ಪ್ರೇಮ ಅವರ ಮೇಲೆ?
ಫೋಟೋವನ್ನು ಒಂದು ಒಳ್ಳೆಯ ಉದ್ದೇಶದಿಂದಲೇ ಮಾಡಿದ್ದು ಎಂದುಕೊಳ್ಳೋಣ. ಆದರೆ ಕ್ರಮವು ಮಾತ್ರ ಸರಿಯಾದುದಲ್ಲ. ರಾಯರ ಮೇಲೆ ಭಕ್ತಿಯನ್ನು, ಸರಿಯಾದ ಮಾರ್ಗವನ್ನು ಪ್ರೀತಿಯಿಂದ ಪ್ರಚಾರ ಮಾಡಬೇಕೇ ಹೊರತು ಹೀಗೆ ವಿಚಿತ್ರರೀತಿಯಲ್ಲಿ ಅಲ್ಲ. ಹೀಗೆ ಮಾಡಿದರೆ ನಮಗೂ ಮಿಶನರಿಗಳಿಗೂ ವ್ಯತ್ಯಾಸವೇ ಇಲ್ಲವಾಗುತ್ತದೆ.
ದುಃಖವನ್ನು ತಡೆಯದೆ, ಕಣ್ಣುಗಳೆರಡನ್ನೂ ಮುಚ್ಚಿ, ಕೃಷ್ಣ ಕೃಷ್ಣ…. ಎನ್ನುತ್ತಲೇ ಇರುವಂತೆ… ಜನರ ಮಧ್ಯದಿಂದ ಮತ್ತೊಮ್ಮೆ ಬಂಗಾರದ ಹೊಳೆಯಂತೆ ಬೆಳಕು ಬಂದಿತು. ಕಂಗಳ ಒಳಪಟಲಕ್ಕೆ ಆ ಬೆಳಕು ಸೋಕಿದ್ದೇ ತಡ. ಕಂಬನಿ ತುಂಬಿದ ತನ್ನ ಕಣ್ಣೆವೆಗಳನ್ನು ನಿಧಾನವಾಗಿ ತೆರೆದಳು ಕುಬ್ಜೆ. ಅಷ್ಟೇ!. ಹೃದಯವು ಒಮ್ಮೆಗೇ, ಒಂದೇ ಬಾರಿ ಸದ್ದು ಮಾಡಿ ನಿಂತೇ ಹೋದಂತಾಯಿತು. ಬಂದದ್ದು ಬೆಳಕು ಮಾತ್ರವಲ್ಲ. ತನ್ನ ಹೃದಯಪ್ರಕಾಶದ ಒಡೆಯನೇ ನಡೆದು ಬಂದಿದ್ದ!