eeshavasyam Posts

May 24, 2018 / / Articles

ಆರ್ಥಿಕ ಪ್ರಗತಿಯನ್ನು ಸಾಧಿಸಲು ಇರುವ ಎಲ್ಲ ದಾರಿಗಳನ್ನೂ ಹಿಂದಿನ ಕಾಂಗ್ರೆಸ್ ಸರ್ಕಾರಗಳು ತಮ್ಮ ಯಥಾಶಕ್ತಿ ಮುಚ್ಚಿಯೇ ಹಾಕಿವೆ! ಈಗ ಆ ಮುಚ್ಚಿ ಹೋಗಿರುವ ಮಾರ್ಗಗಳನ್ನು ತೆಗೆಯಬೇಕು. ಜೊತೆಗೆ ಹೊಸದಾದ, ನಮ್ಮ ಸಂಸ್ಕೃತಿಗೆ ಹಾನಿ ಮಾಡಲಾರದ ಮಾರ್ಗಗಳನ್ನೂ ಹುಡುಕಬೇಕು. ಸಧ್ಯದ ಪರಿಸ್ಥಿತಿ ನೋಡಿದರೆ ಹೊಲಸು ಜನರು ಮೋದಿಯವರನ್ನ ಸ್ಥೈರ್ಯವನ್ನು ಕುಗ್ಗಿಸುವ ಎಲ್ಲ ವಿಧವಾದ ಅನೈತಿಕ ಪ್ರಯತ್ನಗಳನ್ನೂ ಮಾಡುತ್ತಿದ್ದಾರೆ. ಹೀಗಿರುವಾಗ ಎಲ್ಲರಿಗಿಂತ ಪ್ರಾಮಾಣಿಕರೆನಿಸುವ ಮೋದಿಯವರ ಒಳಿತಿಗಾಗಿ ಪ್ರಾರ್ಥನೆ ಮಾಡುವುದರಲ್ಲಿ ತಪ್ಪೇನು?

April 28, 2018 / / Articles

ಜಲಸ್ಥಂ ವಿಷ್ಣು, ಡೋಲಸ್ಥಂ ಕೃಷ್ಣಂ, ರಥಸ್ಥಂ ಕೇಶವಂ ದೃಷ್ಟ್ವಾ ಪುನರ್ಜನ್ಮ ನ ವಿದ್ಯತೇ ಎಂದು ಹಿರಿಯರು ಹೇಳಿದ್ದಾರೆ. ಕೇಶವನ ರಥೋತ್ಸವವನ್ನೂ ಕೃಷ್ಣನ ತೊಟ್ಟಿಲು ಸೇವೆಯನ್ನೂ ನಾವು ಅನೇಕ ಕಡೆ ನೋಡಿದ್ದೇವೆ. ಆದರೆ ಜಲಶಾಯಿಯಾದ ನಾರಾಯಣನನ್ನು ನೋಡಿರುವವರು ಕಡಿಮೆ. ಕೇವಲ ಭಾಗ್ಯಶಾಲಿಗಳಷ್ಟೇ ನೋಡಲು ಸಾಧ್ಯ. ಯಾಕೆಂದರೆ ಜಲನಾರಾಯಣನ ಗುಡಿಯು ಇರುವುದು ನೇಪಾಳದಲ್ಲಿ. ಅಲ್ಲಿಗೆ ಎಲ್ಲರೂ ಹೋಗಲಾಗುವುದಿಲ್ಲ ಅಲ್ಲವೇ!? ಚಿಂತೆ ಬೇಡ. “ಸುಲಭಪೂಜೆಯ ಮಾಡಿ ಬಲವಿಲ್ಲದವರು” ಎಂಬ ದಾಸರ ಮಾತನ್ನು ನೆನೆಸಿಕೊಳ್ಳೋಣ. ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ ಭಕ್ತಿಯಿಂದ, ಆದಷ್ಟೂ ಅನುಸಂಧಾನಪೂರ್ವಕವಾಗಿ ಪೂಜಿಸೋಣ. ದೇವನು ಖಂಡಿತವಾಗಿಯೂ ಪ್ರೀತನಾಗುವನು. ಎಷ್ಟು ಸುಲಭವಾದ ಪೂಜೆ ನೋಡಿ ಇದು.

April 4, 2018 / / Songs and Stotras

ಗುರಣ್ಣ ಅವರು ಶ್ರೀಗುರುಗಳ, ಮುಖ್ಯಪ್ರಾಣರ ಮತ್ತು ಶ್ರೀಕೃಷ್ಣದೇವರ ಕೃಪೆಗೆ ಪಾತ್ರರಾದವರು. ಸಾಕಷ್ಟು ಸಂಪತ್ತನ್ನೂ ಮತ್ತು ಮನಸಾರೆಯಾಗಿ ಆ ಸಂಪತ್ತನ್ನು ದಾನ ಮಾಡುವ ಉದಾರ ಹೃದಯವನ್ನೂ ಅವರಿಗೆ ದಯಪಾಲಿಸಿದ್ದಾರೆ ಹರಿವಾಯುಗುರುಗಳು. ಆದರೂ ಚೂರೂ ಅಹಂಕಾರವನ್ನು ಬೆಳೆಸಿಕೊಳ್ಳದೆ ಎಲ್ಲರೊಂದಿಗೂ ಅಣ್ಣ ಅಣ್ಣ ಎಂದೇ ಮಾತನಾಡಿಸುವ ಸಜ್ಜನ ಇವರು. ಇಂತಹ ಸೌಜನ್ಯ ಇರುವುದರಿಂದಲೇ ಏನೋ ಇವರ ಹಾಡು ಬಾಯಿಯಿಂದ ಬರದೆ, ಹೃದಯದಿಂದ ಹೊರಬರುತ್ತದೆ.

March 8, 2018 / / Articles

ಆದರೆ ಹುಲಿಯ ವಿಷಯ ಹಾಗಲ್ಲ! ಅದರ ಶಕ್ತಿಯು ಅಪಾರ. ಆದರೂ ಅದು ಸಂಕೋಚದ ಜೀವಿ. ದಟ್ಟ ಕಾಡಿನ ಮಧ್ಯವೇ ಅದರ ವಾಸ. ಅತ್ಯಗತ್ಯವಿಲ್ಲದೆ ಅದು ಇತರರೆಡೆ ಬಾರದು. ಸಿಂಹದಂತೆ ತನ್ನ ಗುಂಪಿನ ಇನ್ನಿತರ ಮೇಲೆ ಆಹಾರಕ್ಕಾಗಿ ಅವಲಂಬನೆಯನ್ನೂ ಅದು ಮಾಡದು. ಕೋಪ ಬಂತೆಂದು ಸಲಗನಂತೆ ಬಂಡಾಯದ ವಿಧ್ವಂಸಕಾರ್ಯವನ್ನೂ ಮಾಡದು. ಕೆಲಸ ಮುಗಿದ ನಂತರ ಮತ್ತೆ ತನ್ನ ವಾಸಸ್ಥಾನವನ್ನು ಸದ್ದಿಲ್ಲದಂತೆ ಸೇರಿಕೊಂಡು ಬಿಡುವುದು. ವಿನಾಕಾರಣ ಬೇರಯವರ ಮೇಲೆ ಎಂದೂ ಎರಗದು! ಆದರೆ ಅದರ ಎಲ್ಲೆಯನ್ನು ಪ್ರಶ್ನಿಸಿದಿರೋ! ಮುಂದಿನದನ್ನು ಓದಲು ನೀವು ಇರುವುದೇ ಇಲ್ಲ!

March 7, 2018 / / Articles

ಜಗತ್ತಿಗೆ ಜ್ಞಾನದ ರುಚಿಯನ್ನು ತೋರಿಸಿದ ಶ್ರೀವೇದವ್ಯಾಸದೇವರು ನೆಲೆಸಿರುವುದು ಹಿಮಾಲಯದ ಉತ್ತರ ಭಾಗದಲ್ಲಿ. ಹಿಮಪರ್ವತಗಳಿಂದ ಸುತ್ತುವರೆದ ಬೆಚ್ಚನೆಯ ತಪ್ಪಲಿನಲ್ಲಿ ಅವರ ಆಶ್ರಮವಿದೆ. ಬದರಿಕಾಶ್ರಮ ಎನ್ನುವುದು ಅವರ ಆಶ್ರಮದ ಹೆಸರು. ಈ ಬದರಿಕಾಶ್ರಮವು ಇರುವ ಪ್ರದೇಶ ಬಹು ರಮಣೀಯವಾಗಿದೆ. ಇದಕ್ಕೆ ಶಮ್ಯಾಪ್ರಾಸವೆನ್ನುವ ಮುದ್ದಾದ ಹೆಸರು ಇದೆ

January 26, 2018 / / Songs and Stotras
December 16, 2017 / / Songs and Stotras
October 23, 2017 / / Songs and Stotras
August 7, 2017 / / Articles

ಶ್ರೀಕೃಷ್ಣದೇವರ ಪಂಚಾಮೃತಕ್ಕೆ ನರ್ಮದೆಯೇ ಹಾಲುಕೊಡುವವಳು. ದುರ್ದೈವದ ಗಳಿಗೆಯೊಂದರಲ್ಲಿ ಹುಲಿಯೊಂದು ನರ್ಮದೆಯನ್ನು ತಿಂದುಬಿಟ್ಟಿತು. ಇದನ್ನು ತಿಳಿದ ಶ್ರೀರಘುಪ್ರವೀರತೀರ್ಥರ ಹೃದಯವು ತೀವ್ರವಾಗಿ ನೊಂದಿತು. ವ್ಯಥೆಗೊಂಡ ಅವರು ಪದ್ಮಾಸನದಲ್ಲಿ ಕುಳಿತುಬಿಟ್ಟರು. ಮಧ್ಯಾಹ್ನವಾದರೂ ಪೂಜೆಗೆ ಏಳಲಿಲ್ಲ. ಮಠದ ಸಿಬ್ಬಂದಿಗಳು ಚಿಂತಿತರಾದರು. ಇತ್ತ ಮಠದ ಹೊರಗೆ ವಿಲಕ್ಷಣವಾದ ಘಟನೆಯೊಂದು ನಡೆಯಿತು.

August 4, 2017 / / Songs and Stotras