ಸಾಧನೆ ಮಾಡಲು ಉಪಾಯ ಬೇಕಾ?

ಸಾಧನಕೆ ಬಗೆಗಾಣೆನೆನ್ನಬಹುದೆ

ಸಾದರದಿ ಗುರುಕರುಣ ತಾ ಪಡೆದ ಬಳಿಕ || ಪ ||

ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ
ಉಂಡು ಉಟ್ಟದ್ದೆಲ್ಲ ವಿಷ್ಣುಪೂಜೆ
ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ
ಹಿಂಡು ಮಾತುಗಳೆಲ್ಲ ಹರಿಯ ನಾಮ || ೧ ||

ವಾಗತ್ಯಪಡುವುದೆ ವಿಧಿನಿಷೇಧಾಚರಣೆ
ರೋಗಾನುಭವವೆಲ್ಲ ಉಗ್ರತಪವು
ಆಗದವರಾಡಿಕೊಂಬುದೆ ಆಶೀರ್ವಾದ
ಬೀಗರುಪಚಾರವೇ ಭೂತದಯವು || ೨ ||

ಮೈಮರೆತು ಮಲಗುವುದೆ ಧರಣಿಗೆ ನಮಸ್ಕಾರ
ಕೈಮೀರಿ ಹೋದದ್ದೆ ಕೃಷ್ಣಾರ್ಪಣ
ಮೈಮನೋವೃತ್ತಿಗಳೆ ವಿಷಯದಲಿ ವೈರಾಗ್ಯ
ಹೊಯ್ಮಾಲಿತನವೆಲ್ಲ ಹರಿಯ ವಿಹಾರ || ೩ ||

ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ
ನಡೆದಾಡುವೋದೆಲ್ಲ ತೀರ್ಥಯಾತ್ರೆ
ಬಡತನ ಬರಲದೇ ಭಗವದ್ಭಜನೆಯೋಗ
ಸಡಗರದಲಿಪ್ಪುದೆ ಶ್ರೀಶನಾಜ್ಞೆ || ೪ ||

ಬುದ್ಧಿಸಾಲದೆ ಸುಮ್ಮನಿರುವುದೇ ಸಮ್ಮತವು
ಯದೃಚ್ಛಾಲಾಭವೇ ಸುಖವು ಎನಲು
ಮಧ್ವಾಂತರ್ಗತ ಶ್ರೀವಿಜಯವಿಠ್ಠಲರೇಯ
ಹೃದ್ಗತಾರ್ಥವ ತಿಳಿದು ಒಪ್ಪಿಸಿಕೊಳನೆ || ೫ ||

ರಘು

ಕಾಮಧೇನುವಿನ ಪೀಳಿಗೆಯ ಹಸುವಿನ ನೆರಳನ್ನು ಆಶ್ರಯಿಸಿ ಜೀವಿಸುತ್ತಿರುವವನು.

More Posts

ರಘು Written by:

ಕಾಮಧೇನುವಿನ ಪೀಳಿಗೆಯ ಹಸುವಿನ ನೆರಳನ್ನು ಆಶ್ರಯಿಸಿ ಜೀವಿಸುತ್ತಿರುವವನು.

Be First to Comment

Leave a Reply

This site uses Akismet to reduce spam. Learn how your comment data is processed.